PLEASE LOGIN TO KANNADANET.COM FOR REGULAR NEWS-UPDATES

೧೧-೦೧-೨೦೧೫ ರಂದು ವಿದ್ಯಾರ್ಥಿ ಯಲ್ಲಾಲಿಂಗನ ಕಗ್ಗೋಲೆಯನ್ನು ಖಂಡಿಸಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಭಯಮುಕ್ತ ವಾತಾವರಣವನ್ನು ಹೊಡೆದೊಡಿಸಲು ಈ ಕೊಗ್ಗೋಲೆ ಪಾತಕಿಗಳಿಗೆ ರಕ್ಷಣೆ ನೀಡುತ್ತಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಈ ಕೊಲೆ ಪ್ರಕರಣವನ್ನು ಸಿಬಿಐ ಗೆ ವಹಿಸಿಬೇಕೆಂದು ಆಗ್ರಹಿಸಿ ಕೊಪ್ಪಳ ಅಶೋಕ ವೃತ್ತದಿಂದ ಬೆಳಿಗ್ಗೆ ೧೦ ಗಂಟೆಗೆ ಮೇರವಣಿಗೆಯ ಮೂಲಕ ಜಿಲ್ಲಾ ಅಧಿಕಾರಿಗಳ ಕಾರ್ಯಲಯದ ಮುಂದೆ ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಮತ್ತು ಸಂಸದರಾದ ಶ್ರೀ ಕರಡಿ ಸಂಗಣ್ಣನವರ ನೇತೃತ್ವ ವಹಿಸಲಿದ್ದಾರೆ. ಈ ಪ್ರತಿಭಟಣೆಗೆ ರಾಷ್ಟ್ರೀಯ ಉಪಾಧ್ಯಕ್ಷರು, ರೈತ ಮುಖಂಡರು, ಮಾಜಿ ಮುಖ್ಯ ಮಂತ್ರಿಗಳಾದ ಮತ್ತು ಸಂಸದರು ಶ್ರೀಬಿ.ಎಸ್.ಯಡಿಯೂರಪ್ಪನವರು, ರಾಜ್ಯದ್ಯಕ್ಷರು ಮತ್ತು ಸಂಸದರಾದ ಶ್ರೀ ಪ್ರಲ್ಲಾದ್ ಜೋಷಿಯವರು, ಮಾಜಿ ಮುಖ್ಯ ಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಶ್ರೀ ಜಗದೀಶ ಶೆಟ್ಟರವರು, ಮಾಜಿ ಉಪಮುಖ್ಯ ಮಂತ್ರಿಗಳು ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಕೆ.ಎಸ್. ಈಶ್ವರಪ್ಪನವರು, ರಾಜ್ಯ ಉಪಾಧ್ಯಕ್ಷರು ಮತ್ತು ವಿಧಾನ ಪರಿಷತ್ತ ಸದಸ್ಯರಾದ ಹಾಲಪ್ಪ ಆಚಾರ, ಹಿಂದುಳಿದ ವರ್ಗದ ನಾಯಕರು ಹಾಗೂ ಸಂಸದರಾದ ಶ್ರೀರಾಮುಲು, ಜಿಲ್ಲೆಯ ಶಾಸಕರಾದ ದೊಡ್ಡನಗೌಡ ಪಾಟೀಲ, ಮಾಜಿ ಸಂಸದರಾದ ಕೆ.ವಿರುಪಾಕ್ಷಪ್ಪ, ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಎಸ್.ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ದಡೇಸೂರು ಬಸವರಾಜ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಹೆಚ್ ಗಿರೇಗೌಡ್ರ,  ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಅಮರೇಶ ಕೊಳಗಿ, ರಾಜ್ಯ ರೈತ ಮೋರ್ಚಾ ಕಾರ್ಯ ಕಾರಣಿ ಸದಸ್ಯರಾದ ಮುಖುಂದರಾವ್ ಭವಾನಿಮಠ ಬಿ ಜೆ ಪಿ ಮುಖಂಡರಾದ ಕೊಲ್ಲಾ ಶೆಷಗಿರಿರಾವ್ ಜಿಲ್ಲೆಯ ಬಿ.ಜೆ.ಪಿ ಜಿಲ್ಲಾ ಪಂಚಾಯತಿ ಸದಸ್ಯರು ಮತ್ತು ತಾಲೂಕ ಪಂಚಾಯತಿ ಜಿಲ್ಲೆಯ ಎಲ್ಲಾ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು   ಈ ಪ್ರತಿಭಟಣೆಗೆ ಸುಮಾರು ೬ ಸಾವಿರ ಬಿಜೆಪಿ ಕಾರ್ಯಕರ್ತರು ಪಾಲ್ಗೋಳ್ಳುವರೆಂದು ಕೊಪ್ಪಳ ಜಿಲ್ಲೆ ಬಿಜೆಪಿ ವಕ್ತಾರರಾದ ಶ್ರೀ ಚಂದ್ರಶೇಖರ ಪಾಟೀಲ ಹಲಗೇರಿ ತಿಳಿಸಿದ್ದಾರೆ. 

Advertisement

0 comments:

Post a Comment

 
Top