PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೨೩ ಬಾಗಲಕೋಟೆ ಜಿಲ್ಲೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ತರಕಾರಿ ಮತ್ತು ಪುಷ್ಪ ಬೆಳೆಗಳ ಬೇಸಾಯ ಕ್ರಮಗಳ ಕುರಿತು ಮೂರು ದಿನಗಳ ರಾಜ್ಯಮಟ್ಟದ ತರಬೇತಿ ಶಿಬಿರವನ್ನು ಆಗಸ್ಟ್ ತಿಂಗಳಿನಲ್ಲಿ ಏರ್ಪಡಿಸಲಾಗಿದೆ. ವಿವಿಧ ತರಕಾರಿ ಮತ್ತು ಪುಷ್ಪ ಬೆಳೆಗಳಲ್ಲಿ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಕೊಯ್ಲೋತ್ತರ ಹಾಗೂ ಸಂಸ್ಕರಣಾ ಕ್ರಮಗಳು, ಮಾರುಕಟ್ಟೆ ವಿಧಾನಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು.  ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಭಾಗವಹಿಸಲಿಚ್ಛಿಸುವ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಅಥವಾ ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ಆಗಸ್ಟ್.೦೮ ರೊಳಗಾಗಿ ಕೇಂದ್ರದಲ್ಲಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ- ೫೮೭೧೦೩. ಮೊಬೈಲ್: ೯೪೮೨೬೩೦೭೯೦ ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.    

Advertisement

0 comments:

Post a Comment

 
Top