PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ -29- ತಾಲೂಕಿನ ಲೇಬಗೇರಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಶ್ರೀ ಸಪ್ತಗಿರಿ ನಗರ ಮತ್ತು ಗ್ರಾಮಾಭಿವೃದ್ಧಿ ಸಂಸ್ಥೆ ಹುನುಗುಂದ ಇವರ  ಆಶ್ರಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಡ ಪಂಗಡ ವಿದ್ಯಾರ್ಥಿಗಳಿಗೆ ಅಬಾಕಸ್ ತರಬೇತಿಯನ್ನು ಏರ್ಪಡಿಸಲಾಯಿತು.
                   ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಎ ಆರ್ ವೆಂಕಟೇಶ ಅವರು ಅಬಾಕಸ್ ಶಿಕ್ಷಣ ಕಲಿಕಾ ವಿದಾನವು ವಿದ್ಯಾರ್ಥಿಗಳಿಗೆ ಸುಲಲಿತವಾಗಿ ಗಣಿತ ವಿಷಯವನ್ನು ಅರಿಯಲು ತುಂಬಾ ಸಹಕಾರಿಯಾಗಿದೆ ಎಂದು ತಿಳಿಸಿದರು. ನಂತರ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಸಂಗಮೇಶ ಅವರು 
            ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಾರುತೆಪ್ಪ ಸಂಗಟಿ ಸೇರಿದಂತೆ ಸಂಸ್ಥೆ ಸಿಬ್ಬಂದಿಗಳಾದ ಅಂಬುಜಾ, ವೆಂಕಟೇಶ ಹಾಗೂ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಲಾಯಪ್ಪ ನಂದ್ಯಾಳ ನಿರೂಪಿಸಿದರು ಸಹ ಶಿಕ್ಷಕಿಯಾದ ಸುಮಾ ಕೆ.ಎಸ್. ವಂದಿಸಿದರು.

ಮಾತನಾಡಿ ೧೪ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಅಬಾಕಸ್ ಶಿಕ್ಷಣ ಕಲಿಕಾ ಶಿಬಿರ ಆಯೋಜಿಸಿದ್ದು ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯೋಪಾದ್ಯಾಯರಾದ ಶ್ರೀಮತಿ ಹುಚ್ಚಮ್ಮ ಹಂಚನಾಳ ಮಾತನಾಡಿ ಸರಕಾರದಿಂದ ಬರುವ ಯೋಜನೆಗಳು ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಸಂಪೂರ್ಣವಾಗಿ ಭಾಗವಹಿಸಬೇಕೆಂದು ಅಭಿಪ್ರಾಯಪಟ್ಟರು ಮಾರ್ಗದರ್ಶನ ನೀಡಿದರು.

Advertisement

0 comments:

Post a Comment

 
Top