ಕೊಪ್ಪಳ, ಆ.೧೧ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಆ.೧೨, ೧೩, ೧೪ ಮತ್ತು ಆ.೧೫ ರಂದು ನಾಲ್ಕು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಆ.೧೨ ರಂದು ಮಧ್ಯಾಹ್ನ ೦೨ ಗಂಟೆಗೆ ಕಾರಟಗಿಗೆ ಆಗಮಿಸಿ, ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಹೂಡುವರು. ಆ.೧೩ ಮತ್ತು ಆ.೧೪ ರಂದು ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಹೂಡುವರು. ಆ.೧೫ ರಂದು ಬೆಳಿಗ್ಗೆ ಕೊಪ್ಪಳಕ್ಕೆ ಆಗಮಿಸಿ, ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ೬೯ ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧೨.೩೦ ಗಂಟೆಗೆ ತಾಲೂಕಿನ ಯತ್ನಟ್ಟಿ-ಭಾಗ್ಯನಗರ-ಹಿರೇಹಳ್ಳ ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧.೩೦ ಗಂಟೆಗೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೨.೩೦ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಚಿವರು ಆ.೧೨ ರಂದು ಮಧ್ಯಾಹ್ನ ೦೨ ಗಂಟೆಗೆ ಕಾರಟಗಿಗೆ ಆಗಮಿಸಿ, ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಹೂಡುವರು. ಆ.೧೩ ಮತ್ತು ಆ.೧೪ ರಂದು ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಹೂಡುವರು. ಆ.೧೫ ರಂದು ಬೆಳಿಗ್ಗೆ ಕೊಪ್ಪಳಕ್ಕೆ ಆಗಮಿಸಿ, ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ೬೯ ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧೨.೩೦ ಗಂಟೆಗೆ ತಾಲೂಕಿನ ಯತ್ನಟ್ಟಿ-ಭಾಗ್ಯನಗರ-ಹಿರೇಹಳ್ಳ ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧.೩೦ ಗಂಟೆಗೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೨.೩೦ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
0 comments:
Post a Comment