PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. ೧೯ (ಕ ವಾ) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ.ಕ.ರ.ಸಾ.ಸಂಸ್ಥೆ ಕೊಪ್ಪಳ ವಿಭಾಗದವರ ಸಹಯೋಗದೊಂದಿಗೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣ ಆವರಣದಲ್ಲಿ ಸೋಮವಾರದಂದು ಆಯೋಜಿಸಿದ್ದ, ಗಾಂಧೀಜಿಯವರ ಜೀವನ ಚರಿತ್ರೆಗೆ ಸಂಬಂಧಿಸಿದ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ನಿಲ್ದಾಣಕ್ಕೆ ಆಗಮಿಸಿದ್ದ ನೂರಾರು ಪ್ರಯಾಣಿಕರು ಹಾಗೂ ಸಾರ್ವಜನಿಕರು ವೀಕ್ಷಿಸಿದರು.
     ಗಾಂಧೀಜಿಯವರ ಜೀವನ ಚರಿತ್ರೆ ಕುರಿತ ಛಾಯಾ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಎಸ್. ಹಾವೇರಿ ಅವರು ಛಾಯಾಚಿತ್ರ ಪ್ರದರ್ಶನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.  ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪೃಷ್ಯತೆಯ ನಿವಾರಣೆಗಾಗಿ ಗಾಂಧೀಜಿಯವರು ನಡೆಸಿದ ಆಂದೋಲನ, ೧೯೨೪ ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೇಸ್
       ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಈ.ಕ.ರ.ಸಾ.ಸಂಸ್ಥೆ ಕೊಪ್ಪಳ ವಿಭಾಗದ ಆಡಳಿತಾಧಿಕಾರಿ ಬಿ.ಎಸ್. ಮುನಿರಾಮೇಗೌಡ, ಕೊಪ್ಪಳ ಬಸ್ ಡಿಪೋ ಮ್ಯಾನೇಜರ್ ಬಿ.ವಿ. ಬಟ್ಟೂರ, ಸಹಾಯಕ ಸಂಚಾರ ವ್ಯವಸ್ಥಾಪಕ ಆರ್.ಬಿ. ಮಾನೆ, ಸಹಾಯಕ ಕಾನೂನು ಅಧಿಕಾರಿ ಸುನಿಲ್, ವಾರ್ತಾ ಇಲಾಖೆಯ ಅವಿನಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು, 

ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.   ಈ ವಿಶೇಷ ಛಾಯಾಚಿತ್ರ ಪ್ರದರ್ಶನ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಕೆಲ ಪ್ರಯಾಣಿಕರು  ಮಹಾತ್ಮಾ ಗಾಂಧೀಜಿಯವರ ಜೀವನದ  ಮಹತ್ವದ ಛಾಯಾಚಿತ್ರಗಳನ್ನು ಇದುವರೆಗೂ ನೋಡಿರಲಿಲ್ಲ. ಛಾಯಾಚಿತ್ರ ಪ್ರದರ್ಶನವು ಗಾಂಧೀಜಿಯವರ ಜೀವನದ ಕಾಲಘಟ್ಟ ಅರಿಯಲು ಸಹಕಾರಿಯಾಯಿತು ಎಂದರು. 

Advertisement

0 comments:

Post a Comment

 
Top