ಕೊಪ್ಪಳ ಡಿ. ೨೩
(ಕ ವಾ)ಹೈದ್ರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಇಲ್ಲಿನ ಕಲೆ,
ಸಂಸ್ಕೃತಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳು, ಇಲ್ಲಿನ ಪ್ರತಿಭೆಗಳು, ಸಾಧಕರು ಮುಂತಾದ
ಸಂಗತಿಗಳನ್ನು ಪರಿಚಯಿಸುವ ಈಶಾನ್ಯದ ಐಸಿರಿ ಸರಣಿಯ ೧೫ ನೇ ಸಂಚಿಕೆ ಡಿ. ೨೭ ರಂದು
ಬೆಳಿಗ್ಗೆ ೦೯-೫೪ ಗಂಟೆಗೆ ಹೊಸಪೇಟೆ, ರಾಯಚೂರು ಹಾಗೂ ಕಲಬುರಗಿ ಆಕಾಶವಾಣಿ ಕೇಂದ್ರಗಳಿಂದ
ಏಕಕಾಲಕ್ಕೆ ಪ್ರಸಾರವಾಗಲಿದೆ.
ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೫ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ. ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪರಿಚಯ. ನಿವೃತ್ತ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿರುವ ಎನ್.ಬಿ.ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನದ ಪಾಠ. ನಿವೃತ್ತ ನ್ಯಾಯಮೂರ್ತಿಗಳಾಗಿರುವ ಎಮ್.ಬಿ. ಬಿರಾದಾರ ಅವರಿಂದ ಸಂವಿಧಾನದ ಕುರಿತು ಮಾಹಿತಿ. ಆಳಂದ ತಾ: ಗುಂಜ ಬಬಲಾದ ಗ್ರಾಮದ ರಮಾಬಾಯಿ ಮಹಿಳಾ ಸ್ವಸಹಾಯ ಸಂಘದ ಸದಸೆಯರ ಸಾಧನೆಯ ಹಾದಿ. ಕಲಬುರಗಿಯ ಪ್ರತಿಭಾವಂತ ಯುವ ರಂಗಕರ್ಮಿ ಅಬ್ದುಲ್ ಸಾಜಿದ ಶೇಖ್ ಅವರ ಅನುಭವ. ಕಲಬುರಗಿಯ ಆಕಾಶವಾಣಿಯ ಕಲಾವಿದ ಗುರುಶಾಂತಯ್ಯಾ ಸ್ಥಾವರ ಮಠ ಅವರಿಂದ ಹಾಡು. ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ 'ವಾರದ ವರದಿ', ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ. ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೫ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ. ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪರಿಚಯ. ನಿವೃತ್ತ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿರುವ ಎನ್.ಬಿ.ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನದ ಪಾಠ. ನಿವೃತ್ತ ನ್ಯಾಯಮೂರ್ತಿಗಳಾಗಿರುವ ಎಮ್.ಬಿ. ಬಿರಾದಾರ ಅವರಿಂದ ಸಂವಿಧಾನದ ಕುರಿತು ಮಾಹಿತಿ. ಆಳಂದ ತಾ: ಗುಂಜ ಬಬಲಾದ ಗ್ರಾಮದ ರಮಾಬಾಯಿ ಮಹಿಳಾ ಸ್ವಸಹಾಯ ಸಂಘದ ಸದಸೆಯರ ಸಾಧನೆಯ ಹಾದಿ. ಕಲಬುರಗಿಯ ಪ್ರತಿಭಾವಂತ ಯುವ ರಂಗಕರ್ಮಿ ಅಬ್ದುಲ್ ಸಾಜಿದ ಶೇಖ್ ಅವರ ಅನುಭವ. ಕಲಬುರಗಿಯ ಆಕಾಶವಾಣಿಯ ಕಲಾವಿದ ಗುರುಶಾಂತಯ್ಯಾ ಸ್ಥಾವರ ಮಠ ಅವರಿಂದ ಹಾಡು. ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ 'ವಾರದ ವರದಿ', ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ. ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
0 comments:
Post a Comment