ಕೊಪ್ಪಳ,
ಡಿ.೨೩ (ಕ ವಾ) ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಮಸ್ಜೀದ್ಗಳಲ್ಲಿ
ಕಾರ್ಯನಿರ್ವಹಿಸುತ್ತಿರುವ ಪೇಶ್ ಇಮಾಮ್ ಮತ್ತು ಮೌಜ್ಜನರಿಗೆ ಗೌರವಧನ
ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದಿಂದ ಗೌರವಧನವನ್ನು ಇದುವರೆಗೂ ಪಡೆಯದವರು, ಬೇರೆಯವರ ಹೆಸರಿನ ಖಾತೆಗೆ ಗೌರವಧನ ಜಮಾ ಆದವರು ಮತ್ತು ಹೊಸದಾಗಿ ಗೌರವಧನ ಪಡೆಯಲಿಚ್ಛಿಸುವವರು ಪರಿಷ್ಕೃತ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಬ್ಯಾಂಕ್ ಖಾತೆಯ ವಿವರ ಮತ್ತು ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ, ಡಿ.೨೮ ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೪.೩೦ ರೊಳಗಾಗಿ ಕೊಪ್ಪಳ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವಕ್ಫ್ ಅಧಿಕಾರಿ ಅತಾವುಲ್ಲಾ ಖಾನ್ ಅವರು ತಿಳಿಸಿದ್ದಾರೆ.
ಸರ್ಕಾರದಿಂದ ಗೌರವಧನವನ್ನು ಇದುವರೆಗೂ ಪಡೆಯದವರು, ಬೇರೆಯವರ ಹೆಸರಿನ ಖಾತೆಗೆ ಗೌರವಧನ ಜಮಾ ಆದವರು ಮತ್ತು ಹೊಸದಾಗಿ ಗೌರವಧನ ಪಡೆಯಲಿಚ್ಛಿಸುವವರು ಪರಿಷ್ಕೃತ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಬ್ಯಾಂಕ್ ಖಾತೆಯ ವಿವರ ಮತ್ತು ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ, ಡಿ.೨೮ ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೪.೩೦ ರೊಳಗಾಗಿ ಕೊಪ್ಪಳ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವಕ್ಫ್ ಅಧಿಕಾರಿ ಅತಾವುಲ್ಲಾ ಖಾನ್ ಅವರು ತಿಳಿಸಿದ್ದಾರೆ.
0 comments:
Post a Comment