PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಡಿ.೧೧ (ಕ ವಾ) ಕನ್ನಡ ಸಾಹಿತ್ಯ ಪರಿಷತ್ತಿನ ೨೦೧೪-೧೫ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿ.೨೫ ರಿಂದ ೨೭ ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯದ ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷಾ ಪ್ರವೇಶ ಪತ್ರಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿ.೧೫ ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಗೌರವ ಸಲಹೆಗಾರರು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮ ಇವರನ್ನು ಸಂಪರ್ಕಿಸಬಹುದಾಗಿದೆ. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದೇ ಇದ್ದಲ್ಲಿ ನೇರವಾಗಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ : ೦೮೦-೨೬೬೨೩೫೮೪ ಗೆ ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ. ಅಲ್ಲದೆ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ
www.kasapa.in  ಮೂಲಕವೂ ಸಹ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಪಿ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

Advertisement

0 comments:

Post a Comment

 
Top