PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜ. ೦೪ (ಕ ವಾ)ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ತ್ರೈಮಾಸಿಕ ಪ್ರಗತಿ ಪರಿಶಿಲನಾ ಸಭೆ ಜ. ೦೬ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
     ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.  ಈ ಮೊದಲು ಸಭೆಯನ್ನು ಜ. ೦೫ ರಂದು ನಡೆಸಲು ನಿಗದಿಪಡಿಸಲಾಗಿತ್ತು.  ಇದೀಗ ಸಭೆಯನ್ನು ಮುಂದೂಡಿ ಜ. ೦೬ ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ತಿಳಿಸಿದ್ದಾರೆ.


Advertisement

0 comments:

Post a Comment

 
Top