ಕೊಪ್ಪಳ
ಜ. ೧೪ (ಕ ವಾ) ಹೈದ್ರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಇಲ್ಲಿನ
ಕಲೆ, ಸಂಸ್ಕೃತಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳು, ಇಲ್ಲಿನ ಪ್ರತಿಭೆಗಳು, ಸಾಧಕರು
ಮುಂತಾದ ಸಂಗತಿಗಳನ್ನು ಪರಿಚಯಿಸುವ ಈಶಾನ್ಯದ ಐಸಿರಿ ಸರಣಿಯ ೧೮ ನೇ ಸಂಚಿಕೆ ಜ. ೧೭ ರಂದು
ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆ, ರಾಯಚೂರು ಹಾಗೂ ಕಲಬುರಗಿ ಆಕಾಶವಾಣಿ ಕೇಂದ್ರಗಳಿಂದ
ಏಕಕಾಲಕ್ಕೆ ಪ್ರಸಾರವಾಗಲಿದೆ.
ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೮ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ. ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆಯವರಿಂದ ದಿವಂಗತ ದೇವರಾಜ ಅರಸ ಅವರ ನೆನಪುಗಳು. ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾಗಿರುವ ಎನ್.ಬಿ. ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನದ ಪಾಠದಲ್ಲಿ ಸ್ವ ಅರಿವು ಮಾಡಿಸಿಕೊಳ್ಳುವ ಬಗ್ಗೆ. ನಿವೃತ್ತ ನ್ಯಾಯ ಮೂರ್ತಿ ಎಂ.ಬಿ ಬಿರಾದರ ಅವರಿಂದ 'ಮಾನವ ಹಕ್ಕುಗಳ' ಕುರಿತು ಮಾಹಿತಿ. ಕನಕ ಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸ್ವಾಮಿರಾಮ ಕುಲಕರ್ಣಿಯವರ ಸಾಧನೆಯ ಪರಿಚಯ. ಆಳಂದ ತಾಲುಕಾ ಗುಂಜ ಬಬಲಾದ ಗ್ರಾಮದ ಭೀಮಬಾಯಿ ಮಹಿಳಾ ಸ್ವ ಸಹಾಯ ಸಂಘದ ಸದ್ಯಸರ ಸಾಧನೆ. ಊರು-ಟೂರಿನಲ್ಲಿ ಬೀದರ ನಗರದ ಪ್ರೇಕ್ಷಣಿಯ ಸ್ಥಳಗಳಿಗೆ ಒಂದು ಸುತ್ತು. ದತ್ತರಾಜ ಕಲಶೇಟ್ಟಿ ಅವರಿಂದ ತತ್ವಪದ ವಾರದ ವರದಿ ಜಿಂಗಲ್ಸ , ನಗೆಹನಿ ಮೂಡಿಬರಲಿದೆ. ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ 'ವಾರದ ವರದಿ', ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ.
ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೮ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ. ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆಯವರಿಂದ ದಿವಂಗತ ದೇವರಾಜ ಅರಸ ಅವರ ನೆನಪುಗಳು. ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾಗಿರುವ ಎನ್.ಬಿ. ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನದ ಪಾಠದಲ್ಲಿ ಸ್ವ ಅರಿವು ಮಾಡಿಸಿಕೊಳ್ಳುವ ಬಗ್ಗೆ. ನಿವೃತ್ತ ನ್ಯಾಯ ಮೂರ್ತಿ ಎಂ.ಬಿ ಬಿರಾದರ ಅವರಿಂದ 'ಮಾನವ ಹಕ್ಕುಗಳ' ಕುರಿತು ಮಾಹಿತಿ. ಕನಕ ಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸ್ವಾಮಿರಾಮ ಕುಲಕರ್ಣಿಯವರ ಸಾಧನೆಯ ಪರಿಚಯ. ಆಳಂದ ತಾಲುಕಾ ಗುಂಜ ಬಬಲಾದ ಗ್ರಾಮದ ಭೀಮಬಾಯಿ ಮಹಿಳಾ ಸ್ವ ಸಹಾಯ ಸಂಘದ ಸದ್ಯಸರ ಸಾಧನೆ. ಊರು-ಟೂರಿನಲ್ಲಿ ಬೀದರ ನಗರದ ಪ್ರೇಕ್ಷಣಿಯ ಸ್ಥಳಗಳಿಗೆ ಒಂದು ಸುತ್ತು. ದತ್ತರಾಜ ಕಲಶೇಟ್ಟಿ ಅವರಿಂದ ತತ್ವಪದ ವಾರದ ವರದಿ ಜಿಂಗಲ್ಸ , ನಗೆಹನಿ ಮೂಡಿಬರಲಿದೆ. ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ 'ವಾರದ ವರದಿ', ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ.
ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
0 comments:
Post a Comment