ಕೊಪ್ಪಳ ಫೆ. ೨೪ (ಕ ವಾ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ದೌರ್ಜನ್ಯಕ್ಕೊಳಗಾದ ಮಹಿಳೆಯರ ಹಿತ ರಕ್ಷಣೆಗಾಗಿಯೇ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಸಿರುವ ಮಹಿಳಾ ವಿಶೇಷ ಚಿಕಿತ್ಸಾ ಘಟಕ (ನಿರ್ಭಯ ಕೇಂದ್ರ) ಕುರಿತು ಮಹಿಳಾ ವಸತಿ ನಿಲಯ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ನಡೆಸಿತು.
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಹಿತ ರಕ್ಷಣೆಗಾಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳಾ ವಿಶೇಷ ಚಿಕಿತ್ಸಾ ಘಟಕ (ನಿರ್ಭಯ ಕೇಂದ್ರ) ಪ್ರಾರಂಭಿಸಲಾಗಿದ್ದು, ಇದರ ಸಹಾಯವಾಣಿ ಕರೆ ಸಂಖ್ಯೆ ೧೮೧ ಆಗಿರುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಠ ಪಂಗಡಗಳ ಮೆಟ್ರಿಕ್ ನಂತರದ ಸರಕಾರಿ ಬಾಲಕಿಯರ ವಸತಿ ನಿಲಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೈತ್ರಿ ಮೆಟ್ರಿಕ್ ನಂತರದ ಮಹಿಳಾ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಸಿಬ್ಬಂದಿಗಳು ಮತ್ತು ವಸತಿ ನಿಲಯದ ಸಿಬ್ಬಂದಿಗಳು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಉದ್ದೇಶ ಮತ್ತು ದೊರೆಯುವ ಉಚಿತ ಸೇವೆಗಳ ಬಗ್ಗೆ ಸಮಾಜ ಕಾರ್ಯಕರ್ತೆ ಹುಲಿಗೆಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು ನಂತರ ಸಮಾಲೋಚಕಿ ಶಿಲ್ಪಾ ಬಾರಕೇರ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳ ಕುರಿತು ಮಾತನಾಡಿದರು. ಕಾನೂನು ಸಲಹೆಗಾರರಾದ ಗೌರಮ್ಮ ದೇಸಾಯಿಯವರು ಕೌಟುಂಬಿಕ ದೌರ್ಜನ್ಯ, ವರದಕ್ಷಣೆ ಕಿರುಕುಳ, ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಕಾಯ್ದೆಗಳು ಅಲ್ಲದೆ, ಪೋಕ್ಸೋ ಕಾನೂನಿನ ಕುರಿತು ಸಮಗ್ರ ವಿವರದೊಂದಿಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಹಿತ ರಕ್ಷಣೆಗಾಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳಾ ವಿಶೇಷ ಚಿಕಿತ್ಸಾ ಘಟಕ (ನಿರ್ಭಯ ಕೇಂದ್ರ) ಪ್ರಾರಂಭಿಸಲಾಗಿದ್ದು, ಇದರ ಸಹಾಯವಾಣಿ ಕರೆ ಸಂಖ್ಯೆ ೧೮೧ ಆಗಿರುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಠ ಪಂಗಡಗಳ ಮೆಟ್ರಿಕ್ ನಂತರದ ಸರಕಾರಿ ಬಾಲಕಿಯರ ವಸತಿ ನಿಲಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೈತ್ರಿ ಮೆಟ್ರಿಕ್ ನಂತರದ ಮಹಿಳಾ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಸಿಬ್ಬಂದಿಗಳು ಮತ್ತು ವಸತಿ ನಿಲಯದ ಸಿಬ್ಬಂದಿಗಳು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಉದ್ದೇಶ ಮತ್ತು ದೊರೆಯುವ ಉಚಿತ ಸೇವೆಗಳ ಬಗ್ಗೆ ಸಮಾಜ ಕಾರ್ಯಕರ್ತೆ ಹುಲಿಗೆಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು ನಂತರ ಸಮಾಲೋಚಕಿ ಶಿಲ್ಪಾ ಬಾರಕೇರ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳ ಕುರಿತು ಮಾತನಾಡಿದರು. ಕಾನೂನು ಸಲಹೆಗಾರರಾದ ಗೌರಮ್ಮ ದೇಸಾಯಿಯವರು ಕೌಟುಂಬಿಕ ದೌರ್ಜನ್ಯ, ವರದಕ್ಷಣೆ ಕಿರುಕುಳ, ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಕಾಯ್ದೆಗಳು ಅಲ್ಲದೆ, ಪೋಕ್ಸೋ ಕಾನೂನಿನ ಕುರಿತು ಸಮಗ್ರ ವಿವರದೊಂದಿಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
0 comments:
Post a Comment