PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಏ.೦೨ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೦೯ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏ. ೦೫ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜರುಗಲಿದೆ.
     ಕಾರ್ಯಕ್ರಮದ ಅಂಗವಾಗಿ ಏ. ೦೫ ರಂದು ಬೆಳಿಗ್ಗೆ ೭-೩೦ ಗಂಟೆಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಗರದ ತಹಸಿಲ್ದಾರರ ಕಚೇರಿಯಿಂದ ಹೊರಡಲಿದ್ದು, ಬಾಬು ಜಗಜೀವನರಾಂ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ.  ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭ ಅಧ್ಯಕ್ಷತೆ ವಹಿಸುವರು.  ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಗಂಗಾವತಿಯ ಸಿ.ಹೆಚ್. ನಾರಿನಾಳ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

0 comments:

Post a Comment

 
Top