PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳದಲ್ಲಿಂದ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಕೊಪ್ಪಳ ಬಂದ್ ಗೆ ಕೊಪ್ಪಳ ನಾಗರಿಕರು ಉತ್ತಮವಾಗಿ ಸ್ಪಂದಿಸಿದ್ದು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ತಮ್ಮ ತಮ್ಮ ವ್ಯಾಪಾರಿ ಸಂಸ್ಥೆಗಳನ್ನು ಬಂದ್ ಮಾಡಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಕರವೇಯ ಕಾರ್ಯಕರ್ತರು ಬಸ್ ನಿಲ್ದಾಣದ ಹತ್ತಿರ ಮೊದಲು ರಸ್ತೆ ತಡೆ ನಡೆಸಿ ನಂತರ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ಗಡಿಯಾರ್ ಕಂಬದಿಂದ ಅಶೋಕ್ ಸರ್ಕ ಲ್ ತನಕ ಮೆರವಣಿಗೆ ನಡೆಸಿದರು.
ಜಿಲ್ಲಾಡಳಿತ ಮತ್ತು ಯಡಿಯೂರಪ್ಪ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಂದ್ ನಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾದರೂ ಸಹಕರಿಸುತ್ತಿದ್ದಾರೆ. ಜನ ಸಂಚಾರ ಎಂದಿನಂತಿದೆ. ಮೆಡಿಕಲ್ ಶ್ಯಾಪ್ ಮತ್ತು ದವಾಖಾನೆಗಳಷ್ಟೇ ತೆರೆದಿದ್ದು ಬಂದ್ ಯಶಸ್ಸಿನತ್ತ ನಡೆಯುತ್ತಿದೆ.
ಕರವೇ ಬಂದ್ ನ ನೇತೃತ್ವವನ್ನು ಕರವೇ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ ಮತ್ತಿತರರು ವಹಿಸಿಕೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ ಮಾಡಿದೆ.
25 Jun 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top