PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ.: ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಹೊಂದಿರುವ ಸಾರ್ವಜನಿಕರು ಅವುಗಳನ್ನು ಕೂಡಲೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾ ದಂಡಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಆದೇಶಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಜಿ.ಪಂ. ಮತ್ತು ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಳ್ಳಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ತಾವು ಹೊಂದಿರುವ ಗನ್/ರಿವಾಲ್ವರ್ ಇತ್ಯಾದಿ ಶಸ್ತ್ರಗಳನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಪೊಲೀಸ್ ಇಲಾಖೆಯ ವಶಕ್ಕೆ ಒಪ್ಪಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

08 Dec 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top