PLEASE LOGIN TO KANNADANET.COM FOR REGULAR NEWS-UPDATES


 ನಾಳೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಕರೆ ಇರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಇಂದು ಪ್ರತಿಕ್ರಿಯೆ ನೀಡಿದ ಸರ್ವಶಿಕ್ಷಣ ಇಲಾಖಾ ಆಯುಕ್ತ ಉಮಾಶಂಕರ್ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ರಜೆ ಘೋಷಿಸುವುದೇ ಆದರೆ ಪರಿಸ್ಥಿತಿಯನ್ನು ನೋಡಿಕೊಂಡು ನಂತರ ರಜೆ ನೀಡುವುದಾಗಿ ಅವರು ಹೇಳಿದರು.
ಪರೀಕ್ಷೆ ಮುಂದೂಡಿಕೆ: ಬೆಂಗಳೂರು ವಿವಿಯ ಪದವಿ ಸ್ನಾತಕೋತ್ತರ ಪರೀಕ್ಷೆಯು ಬಂದ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದೆ ಎಂದು ಉಪ ಕುಲಪತಿ ಪ್ರೊ. ತಿಮ್ಮೇಗೌಡ ತಿಳಿಸಿದ್ದಾರೆ. ಫೆ.20, 21ರ ಪರೀಕ್ಷೆ 22ಕ್ಕೆ ಮುಂದೂಡಲ್ಪಟ್ಟಿದೆ ಎಂದವರು ತಿಳಿಸಿದ್ದಾರೆ.
  ಶಾಲಾ ವಾಹನ ಸಂಚಾರ ಸ್ಥಗಿತ: ಬಂದ್ ಹಿನ್ನೆಲೆಯಲ್ಲಿ ಶಾಲಾ ವಾಹನಗಳ ಸಂಘ ಬಂದ್‌ಗೆ ಬೆಂಬಲ ನೀಡಿದ್ದು, 200ಕ್ಕೂ ಅಧಿಕ ಶಾಲಾವಾಹನಗಳು ತಮ್ಮ ಸಂಚಾರವನ್ನು ಸ್ಥಗಿತಗೊಳಿಸಲಿದೆ ಎಂದು ತಿಳಿದು ಬಂದಿದೆ

Advertisement

0 comments:

Post a Comment

 
Top