PLEASE LOGIN TO KANNADANET.COM FOR REGULAR NEWS-UPDATES


ರಾಜ್ಯದ ಘನತೆಗೆ ಧಕ್ಕೆ ತಂದಿರುವ ಬಿಜೆಪಿ ತೀರಸ್ಕರಿಸಿ, ಹಿತ ಕಾಪಾಡಲು ಮುಂದಾದ ಕೆಜೆಪಿ ಬೆಂಬಲಿಸಿ : ಮೂಲಿಮನಿ
ಕೊಪ್ಪಳ,ಮೇ.೦೨: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಎಲ್ಲಾ ಕ್ಷೇತ್ರದಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದು ನಾಡಿನಲ್ಲಿ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಹಲವಾರು ಹಗರಣದಲ್ಲಿ ಭಾಗಿಯಾಗು
ವುದರ ಮೂಲಕ ರಾಜ್ಯದ ಘನತೆಗೆ ಧಕ್ಕೆ ತಂದಿರುವ ಬಿಜೆಪಿ ತೀರಸ್ಕರಿಸಿ ರಾಜ್ಯದ ಹಿತ ಕಾಪಾಡಲು ಕೆಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಪ್ಪಳ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಡಿ.ನಜೀರ್ ಸಾಬ ಮೂಲಿಮನಿ ಜನತೆಗೆ ಕರೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೆಜೆಪಿ ಪಕ್ಷಕ್ಕೆ ರಾಜ್ಯದಲ್ಲಿ ನಮ್ಮ ರಾಜ್ಯ ರೈತ ಸಂಘ ಬೆಂಬಲ ನೀಡಿದ್ದು, ಅದರಂತೆ ಕೊಪ್ಪಳ ಜಿಲ್ಲೆಯಲ್ಲಿಯೂ ಕೂಡ ಕೆಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಕೈಗೊಳ್ಳಲಾಗಿದೆ. ಎಲ್ಲೇಡೆ ಜನರಿಂದ ಅದರಲ್ಲೂ ವಿಶೇಷವಾಗಿ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದರು. 
ಮುಂದುವರೆದು ಮಾತನಾಡಿದ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಕೆ.ಎಂ.ಸಯ್ಯದ್‌ರವರು ಕೊಪ್ಪಳದಲ್ಲಿ ಸಯ್ಯದ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಎಂಬ ಸ್ವಯಂ ಸೇವಾ ಸಂಸ್ಥೆ ರಚನೆ ಮಾಡಿಕೊಂಡು ಸಾಮಾಜಿಕ ಕಾರ್ಯಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಕ್ರಿಯವಾಗಿ ಬಡವರ, ದೀನದಲಿತರ, ಅಲ್ಪಸಂಖ್ಯಾತರ ಮತ್ತು ಸರ್ವ ಜನಾಂಗದ ಸಮಸ್ಯೆಗಳಿಗೆ ನೇರ ಸ್ಪಂಧನೆ ಮಾಡುವುದರ ಮೂಲಕ ಸಹಾಯ, ಸಹಕಾರ ನೀಡುತ್ತ ಬಂದಿರುವ ಅವರ ಸಮಾಜ ಸೇವಾ ಕಾರ್ಯಕ್ರಮಗಳಿಗೆ ಬೆಂಬಲಿಸಿ ಅವರ ಕೆಲಸ ಕಾರ್ಯಗಳನ್ನು ಮೆಚ್ಚಿ ಅವರಿಗೆ ನಮ್ಮ ಸಂಘದ ಬೆಂಬಲ ಘೋಷಿಸಿ ಅವರ ಗೆಲುವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೆನೆ ಎಂದ ಅವರು, ಕ್ಷೇತ್ರದ ಜನತೆ ಕೆಜೆಪಿ ಅಭ್ಯರ್ಥಿ ಕೆ.ಎಂ.ಸಯ್ಯದ್‌ರವರಿಗೆ ಆಯ್ಕೆ ಮಾಡಿಕೊಳ್ಳಲು ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಪ್ಪಳ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಡಿ.ನಜೀರ್ ಸಾಬ ಮೂಲಿಮನಿ ಕರೆ ನೀಡಿದರು. ಈ ಸಂದರ್ಭದಲ್ಲಿ ಮಹೆಬೂಬ ಮುಲ್ಲಾ, ಯಮನಪ್ಪ ಬಾರಕೇರ, ಕಳಕಪ್ಪ ರಾತೋಡ್ ಮತ್ತಿತರರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top