ಯಾವುದೇ ಬಗೆಯ ವಿಪತ್ತು ನಿರ್ವಹಣೆಯಲ್ಲಿ ಸರ್ಕಾರಿ ವ್ಯವಸ್ಥೆಯ ಜೊತೆಗೆ ಸಾರ್ವಜನಿಕರ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆ ಸಿಪಿಐ ವಿಜಯ ಬಿರಾದಾರ್ ಅವರು ಅಭಿಪ್ರಾಯಪಟ್ಟರು.
.jpg)
.jpg)

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ರವೀಂದ್ರ ಶೀಗನಹಳ್ಳಿ ಅವರು ವಹಿಸಿದ್ದರು. ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಆರ್.ವಿ.ಪತ್ತಾರ, ಸೆಕೆಂಡ್ ಇನ್ ಕಮಾಂಡ್ ಜಲಾಲಸಾಬ ಹುಡೇದ, ಹಿರಿಯ ಬೋಧಕ ರಾಮಪ್ರಸಾದ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪುಟ್ಟಸ್ವಾಮಿ ಕೆ.ಎಮ್., ರಾಜಶೇಖರ ಪಾಟೀಲ್, ಎಸ್.ಬಿ.ಮೇಳಿ, ಲಿಂಗಪ್ಪ.ವೈ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೀಣಾ ಹಾಗೂ ಪ್ರಿಯಾಂಕ ಸಂಗಡಿಗರಿಂದ ಪ್ರಾರ್ಥನೆ ಮಾಡಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪುಟ್ಟಸ್ವಾಮಿ ಕೆ.ಎಮ್. ವಂದಿಸಿದರು.
0 comments:
Post a Comment
Click to see the code!
To insert emoticon you must added at least one space before the code.