PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂ.16 ರಿಂದ 24 ರವರೆಗೆ ಒಟ್ಟು ಏಳು ದಿನಗಳ ಕಾಲ ನಡೆಯುವ ಎಸ್.ಎಸ್.ಎಲ್.ಸಿ. ಪೂರಕ  ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಆದೇಶ ಹೊರಡಿಸಿದ್ದಾರೆ.
  ಜಿಲ್ಲೆಯಲ್ಲಿ ಜೂ.16 ರಿಂದ 24 ರವರೆಗೆ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 01.00 ರವರೆಗೆ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಿಸಲಾಗಿದೆ,   ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ನೇ ಕಲಂ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ನಿಷೇಧಿಸಲಾಗಿದೆ  

Advertisement

0 comments:

Post a Comment

 
Top