PLEASE LOGIN TO KANNADANET.COM FOR REGULAR NEWS-UPDATES

  ಕೂಕನಪಳ್ಳಿ ಗ್ರಾಮದಲ್ಲಿ ಪ್ರತಿ ಶುಕ್ರವಾರ ನಡೆಯುತ್ತಿದ್ದ ಕುರಿ ಮತ್ತು ದನದ ಸಂತೆಯನ್ನು ಪ್ರತಿ ಬುಧವಾರ ನಡೆಸಲು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‍ರಾಜ್ ಅವರು ಆದೇಶ ಹೊರಡಿಸಿದ್ದಾರೆ.    ಕೂಕನಪಳ್ಳಿ ಮತ್ತು ಬೂದಗುಂಪಾ ಕ್ರಾಸ್‍ನಲ್ಲಿ ಪ್ರತಿ ಶುಕ್ರವಾರ ಕುರಿ ಮತ್ತು ದನದ ಸಂತೆಯನ್ನು ನಡೆಸಲು ಇತ್ತೀಚೆಗಷ್ಟೆ ಆದೇಶ ಹೊರಡಿಸಲಾಗಿತ್ತು.  ಆದರೆ ಎರಡೂ ಕಡೆ ಒಂದೇ ದಿನ ಸಂತೆ ನಡೆಯುವುದರಿಂದ ವ್ಯಾಪಾರಸ್ಥರಿಗೆ ಮತ್ತು ಗ್ರಾಮಸ್ಥರಿಗೆ ಆರ್ಥಿಕವಾಗಿ ನಷ್ಟವಾಗುತ್ತದೆ.  ಆದ್ದರಿಂದ ಕೂಕನಪಳ್ಳಿ ಗ್ರಾಮದ ಸಾರ್ವಜನಿಕರ ಹಿತದೃಷ್ಟಿ ಹಾಗೂ ವ್ಯವಹಾರದ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೂಕನಪಳ್ಳಿಯಲ್ಲಿ ಪ್ರತಿ ಶುಕ್ರವಾರದ ಬದಲಿಗೆ ಪ್ರತಿ ಬುಧವಾರ ಸಂತೆ ನಡೆಸಲು ಆದೇಶ ಮಾಡಬೇಕೆಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮನವಿಯನ್ನು ಸಲ್ಲಿಸಿದ್ದರು.   ಅಲ್ಲದೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಕಲ್‍ತಾವರಗೇರಾ ಪಿಡಿಓ ಅವರೂ ಸಹ ಕೂಕನಪಳ್ಳಿ ಗ್ರಾಮದಲ್ಲಿ ಪ್ರತಿ ಶುಕ್ರವಾರದ ಬದಲಿಗೆ ಪ್ರತಿ ಬುಧವಾರ ಸಂತೆ ನಡೆಸುವುದು ಸೂಕ್ತವಾಗಿದೆ ಎಂದು ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆದೇಶವನ್ನು ಮಾರ್ಪಡಿಸಿ, ಕೂಕನಪಳ್ಳಿ ಗ್ರಾಮದಲ್ಲಿ ಪ್ರತಿ ಶುಕ್ರವಾರದ ಬದಲಾಗಿ ಪ್ರತಿ ಬುಧವಾರದಂದು ಸಂತೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಆದೇಶ ಹೊರಡಿಸಿದ್ದಾರೆ.

Advertisement

0 comments:

Post a Comment

 
Top