PLEASE LOGIN TO KANNADANET.COM FOR REGULAR NEWS-UPDATES

 ಗಂಗಾವತಿ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಪಾಲನೆಗೆ ಅನುಕೂಲವಾಗುವಂತೆ ಸೆ. 13 ರಂದು ಬೆಳಿಗ್ಗೆ 6 ಗಂಟೆಯಿಂದ ಸೆ. 14 ರಂದು ಬೆಳಿಗ್ಗೆ 6 ಗಂಟೆಯವರೆಗೆ ಗಂಗಾವತಿ ನಗರದಾದ್ಯಂತ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಆದೇಶ ಹೊರಡಿಸಿದ್ದಾರೆ.
  ನಿಷೇಧಾಜ್ಞೆ ಅನ್ವಯ  ಸೆ. 13 ರಂದು ಬೆಳಿಗ್ಗೆ 6 ಗಂಟೆಯಿಂದ ಸೆ. 14 ರಂದು ಬೆಳಿಗ್ಗೆ 6 ಗಂಟೆಯವರೆಗೆ ಗಂಗಾವತಿ ನಗರದಲ್ಲಿನ ಎಲ್ಲ ವೈನ್‍ಶಾಪ್, ಬಾರ್‍ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top