ಕೊಪ್ಪಳ ಸೆ. ೧೬ (ಕ ವಾ) ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸೆ. ೧೭ ಮತ್ತು ೧೮ ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಸೆ. ೧೭ ರಂದು ಬೆಳಿಗ್ಗೆ ಮುನಿರಾಬಾದ್ನಿಂದ ಹೊರಟು ೯ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೧ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು. ಸೆ. ೧೮ ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಕಾರಟಗಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಚಿವರು ಸೆ. ೧೭ ರಂದು ಬೆಳಿಗ್ಗೆ ಮುನಿರಾಬಾದ್ನಿಂದ ಹೊರಟು ೯ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೧ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು. ಸೆ. ೧೮ ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಕಾರಟಗಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
0 comments:
Post a Comment