PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-01- ಜಿಲ್ಲೆಯ ಗಿಣಗೇರಾ, ಗುಂಡೂರು ಗ್ರಾಮದಲ್ಲಿ ಅಕ್ಟೋಬರ್ ೦೨ ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಗಿಣಗೇರಾ - ಕೊಪ್ಪಳ ತಾಲೂಕಿನ ಗಿಣಗೇರಾ ಗ್ರಾಮದಲ್ಲಿ ದಿ. ೦೨ ರಂದು ಶುಕ್ರವಾರ ನವಚೇತನ ಯುವಕ ಸಂಘದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪ ಗಂಟೆಯವರೆಗೆ ಜರುಗಲಿದೆ. ಗುಂಡೂರು - ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ದಿ. ೦೨ ರಂದು ಶುಕ್ರವಾರ ಗ್ರಾಮ ಪಂಚಾಯಿತಿ ಇವರ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪  ಗಂಟೆಯವರೆಗೆ ಜರುಗಲಿದೆ. ಎರಡು ಶಿಬಿರಗಳಲ್ಲಿ ಆಸಕ್ತರು ರಕ್ತದಾನ ಮಾಡಿ ಸಹಕರಿಸುವಂತೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
                   

Advertisement

0 comments:

Post a Comment

 
Top