PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಅ.೦೬ (ಕ ವಾ) ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಕಟವಾದ ಪತ್ರಿಕೆಗಳನ್ನು ಪ್ರೋತ್ಸಾಹಿಸಲು ಸ್ಥಾಪಿಸಲಾಗಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಲೇಖನಗಳನ್ನು ಆಹ್ವಾನಿಸಲಾಗಿದೆ.
     ರಾಜ್ಯ ಮತ್ತು ಜಿಲ್ಲಾಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕೆಗಳು ತಲಾ ೦೧ ಲಕ್ಷ ರೂ.ಗಳ ದತ್ತಿನಿಧಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿದ್ದು, ಆ ದತ್ತಿನಿಧಿಯಲ್ಲಿ ಬಂದಂತಹ ಹತ್ತು ಸಾವಿರ ರೂಪಾಯಿಗಳನ್ನು ಒಳಗೊಂಡ ಪ್ರಶಸ್ತಿಯನ್ನು ತಲಾ ಪ್ರಶಸ್ತಿಗಳಿಗೆ ನೀಡಲಾಗುತ್ತಿದೆ. ೨೦೧೫ ರ ಜನವರಿ ೦೧ ರಿಂದ ಸೆಪ್ಟಂಬರ್ ೩೦ ರೊಳಗೆ ಪ್ರತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸಾಮಾಜಿಕ ಸಮಸ್ಯೆಯನ್ನು ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಅಭಿಮಾನಿ ಪ್ರಶಸ್ತಿ-೨೦೧೫ ಕ್ಕೆ ಹಾಗೂ ಮಾನವೀಯ ಸಮಸ್ಯೆಗೆ ಸಂಬಂಧಪಟ್ಟ ಲೇಖನಗಳನ್ನು ಮೈಸೂರು ದಿಗಂತ-೨೦೧೫ ಪ್ರಶಸ್ತಿಗೆ ಕಳುಹಿಸಬಹುದಾಗಿದೆ.
     ಕನ್ನಡ ದೈನಿಕ ಅಥವಾ ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿದ್ದು, ಲೇಖನ ಅಥವಾ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ಹಾಗೂ ವರದಿಗಳನ್ನು ಅ.೧೩ ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್ ವಿಶ್ವೇಶ್ವರಯ್ಯ ಕೇಂದ್ರ, ಡಾ||ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇವರಿಗೆ ಕಳುಹಿಸಿಕೊಡಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಎಸ್.ಶಂಕರಪ್ಪ ತಿಳಿಸಿದ್ದಾರೆ. 

Advertisement

0 comments:

Post a Comment

 
Top