PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೦೬ (ಕ ವಾ) ರಾಜ್ಯದ ಮೂಲ ಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಖಾತೆ ಸಚಿವರಾದ ಆರ್. ರೋಷನ್ ಬೇಗ್ ಅವರು ನ. ೦೭ ರಂದು ಕೊಪ್ಪಳ ಜಿಲ್ಲೆಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದ್ದ ಪ್ರವಾಸ ಕಾರ್ಯಕ್ರಮ ಪರಿಷ್ಕೃತಗೊಂಡಿದೆ.
     ಸಚಿವರು ಅಂದು ರಾಯಚೂರು ಜಿಲ್ಲೆ ಸಿಂಧನೂರಿನಿಂದ ಹೊರಟು ಸಂಜೆ ೬ ಗಂಟೆಗೆ ಬಳ್ಳಾರಿ ಜಿಲ್ಲೆ ಹೊಸಪೇಟೆಯ ಅಮರಾವತಿ ಸರ್ಕ್ಯೂಟ್ ಹೌಸ್‌ಗೆ ತೆರಳುವರು.  ನಂತರ ಹೊಸಪೇಟೆಯಲ್ಲಿ ಅಂಜುಮನ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಸಚಿವರು ಅದೇ ದಿನ ರಾತ್ರಿ ೯ ಗಂಟೆಗೆ ಹಂಪಿ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Advertisement

0 comments:

Post a Comment

 
Top