PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೦೫ (ಕ ವಾ)  ರಾಜ್ಯದ ಮೂಲ ಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಖಾತೆ ಸಚಿವರಾದ ಆರ್. ರೋಷನ್ ಬೇಗ್ ಅವರು ನ. ೦೭ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ರಾಯಚೂರು ಜಿಲ್ಲೆ ಸಿಂಧನೂರಿನಿಂದ ಹೊರಟು ಸಂಜೆ ೫-೩೦ ಗಂಟೆಗೆ ಗಂಗಾವತಿ ನಗರಕ್ಕೆ ಆಗಮಿಸಿವರು.  ನಂತರ ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕ ಭೇಟಿ ಹಾಗೂ ಕುಂದುಕೊರತೆ ವಿಚಾರಣೆ ನಡೆಸುವರು.  ಸಂಜೆ ೬-೩೦ ಗಂಟೆಗೆ ಬಳ್ಳಾರಿ ಜಿಲ್ಲೆ ಹೊಸಪೇಟೆಯ ವೈಕುಂಟ ಅತಿಥಿಗೃಹಕ್ಕೆ ತೆರಳಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.


Advertisement

0 comments:

Post a Comment

 
Top